Literature - Kannada - Bendre Poem - Yuga yugadi Kaledaru
 
ಯುಗ ಯುಗಾದಿ ಕಳೆದರೂ
 

ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ
ಹೊಸ ವರುಷಕೆ ಹೊಸ ಹರುಷವ ಹೊಸತು ಹೊಸತು ತರುತಿದೆ

ಹೊಂಗೆ ಹೂವ ತೊಂಗಲಲ್ಲಿ ಭೃಂಗದ ಸಂಗೀತ ಕೇಳಿ ಮತ್ತೆ ಕೇಳಬರುತಿದೆ
ಬೇವಿನ ಕಹಿ ಬಾಳಿನಲ್ಲಿ ಹೂವಿನ ನಸುಗಂಪು ಸೂಸಿ ಜೀವಕಳೆಯ ತರುತಿದೆ

ವರುಷಕೊಂದು ಹೊಸತು ಜನ್ಮ ಹರುಷಕೊಂದು ಹೊಸತು ನೆಲೆಯು ಅಖಿಲ ಜೀವಜಾತಕೆ
ಒಂದೆ ಒಂದು ಜನ್ಮದಲ್ಲಿ ಒಂದೆ ಬಾಲ್ಯ ಒಂದೆ ಹರಯ ನಮಗದಷ್ಟೇ ಏತಕೋ

ನಿದ್ದೆಗೊಮ್ಮೆ ನಿತ್ಯ ಮರಣ ಎದ್ದ ಸಲ ನವೀನ ಜನನ ನಮಗೆ ಏಕೆ ಬಾರದೋ
ಎಲೇ ಸನತ್ಕುಮಾರದೇವ ಎಲೇ ಸಾಹಸಿ ಚಿರಂಜೀವ ನಿನಗೆ ಲೀಲೆ ಸೇರದೋ

ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ
ಹೊಸ ವರುಷಕೆ ಹೊಸ ಹರುಷವ ಹೊಸತು ಹೊಸತು ತರುತಿದೆ ನಮ್ಮನಷ್ಟೆ ಮರೆತಿದೆ

- ಆಂಬಿಕಾತನಯದತ್ತ (ದ.ರಾ. ಬೇಂದ್ರೆ )
 


Comments:
 
No comments added yet
 
 
 
Welcome
 
Logout


Comment on this article



 

Personalities | Institutions | Articles | Knowledge Store | Cultural Quiz | About Us | Contact Us | Help Us | Home