Literature - Kannada - Bagilolu Kai Mugidu - Kuvempu Poem
 
ಬಾಗಿಲೊಳು ಕೈಮುಗಿದು ಒಳಗೆ ಬಾ ಯಾತ್ರಿಕನೆ
 

ಬಾಗಿಲೊಳು ಕೈಮುಗಿದು ಒಳಗೆ ಬಾ ಯಾತ್ರಿಕನೆ
ಶಿಲೆಯಲ್ಲವೀ ಗುಡಿಯು ಕಲೆಯ ಬಲೆಯು
ಕಂಬನಿಯ ಮಾಲೆಯನು ಎದೆಯ ಬಟ್ಟಲೊಳಿಟ್ಟು
ಧನ್ಯತೆಯ ಕುಸುಮಗಳ ಅರ್ಪಿಸಿಲ್ಲಿ


ಗಂಟೆಗಳ ದನಿಯಿಲ್ಲ ಜಾಗಟೆಗಳಿಲ್ಲಿಲ್ಲ
ಕರ್ಪೂರದಾರತಿಯ ಜ್ಯೋತಿಯಿಲ್ಲ
ಭಗವಂತ ತಾನೆಂಬ ರೂಪುಗೊಂಡಿಹುದಿಲ್ಲಿ
ರಸಿಕತೆಯ ಕಡಲುಕ್ಕಿ ಹರಿವುದಿಲ್ಲಿ


ಸರಸದಿಂದುಲಿಯುತಿದೆ ಶಿಲೆಯು ರಾಮಾಯಣವಿಲ್ಲಿ
ಬಾದರಾಯಣನಂತೆ ಭಾರತವು ಹಾಡುತಿಹುದಿಲ್ಲಿ
ಕುಶಲತೆಗೆ ಬೆರಗಾಗಿ ಮೂಕವಾಗಿದೆ ಕಾಲವಿಲ್ಲಿ
ಮೂರ್ಛೆಯಲಿ ಮೈಮರೆತು ಕೇಳುವುದು ಭೂಭಾರವಿಲ್ಲಿ


- ಕುವೆಂಪು

 


Comments:
 
No comments added yet
 
 
 
Welcome
 
Logout


Comment on this article



 

Personalities | Institutions | Articles | Knowledge Store | Cultural Quiz | About Us | Contact Us | Help Us | Home